ಇತಿಹಾಸದ ಪುಟಗಳಲ್ಲಿ ಮರೆಯಲಾಗದ ಸುರಪುರದ ದಂಗೆ

Table of Content

ಗುಲ್ಬರ್ಗ ಜಿಲ್ಲೆಯ ಸುರಪುರ ಕರ್ನಾಟಕದ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ ಇನ್ನೊಂದು ಪ್ರಮುಖ ಸ್ಥಳ. ಸುರಪುರದ ರಾಜ ವೆಂಕಟಪ್ಪ ನಾಯಕನು. ಸಂಗೊಳ್ಳಿರಾಯಣ್ಣ ಕೂಡ ಬ್ರಿಟಿಷರ ವಿರುದ್ಧ ಇವನ ಸಹಾಯವನ್ನು ಕೇಳಿದ್ದನು. ೧೮೩೫ರಲ್ಲಿ ಕಿರಿಯ ವಯಸ್ಸಿನ ರಾಜ ವೆಂಕಟಪ್ಪನು ರಾಜ್ಯ ಗದ್ದುಗೆ ಯನ್ನೇರಿದನು.

ಬ್ರಿಟಿಷರ ಹಿಡಿತದಿಂದ ಹೊರಬರುವ ಉತ್ಸಾಹ ದಿಂದ ಸೈನ್ಯದಲ್ಲಿ ಅರಬ್ಬರನ್ನು ಸೇರಿಸಿಕೊಳ್ಳಲು ಪ್ರಾರಂಭಿಸಿದನು. ಇದನ್ನು ಬ್ರಿಟಿಷರು ಸಹಿಸದಾದರು. ಹೈದರಾಬಾದಿನ ನಿಜಾಮನಾದ ಸಾಲರ್ ಜಂಗನ ಸಹಾಯವನ್ನು ಕೇಳಿ ತಿರಸ್ಕೃತಗೊಂಡಿದ್ದನು. ಬ್ರಿಟಿಷರು ಇವನನ್ನು ಬೇಟೆಯಾಡಲು ನಿರ್ಧರಿಸಿ ಸೆರೆಹಿಡಿದರು. ಅವರ ಕೈಯಲ್ಲಿ ಸಾವನ್ನಪ್ಪಲು ಸಿದ್ಧನಿಲ್ಲದ ವೆಂಕಟಪ್ಪನು ಆತ್ಮಹತ್ಯೆ ಮಾಡಿಕೊಂಡನು.

ಇದೇ ಸಂದರ್ಭದಲ್ಲಿ ತಮ್ಮ ತಮ್ಮ ಸ್ವಾತಂತ್ರ್ಯಕ್ಕೋಸ್ಕರ ಪ್ರಯತ್ನ ನಡೆಸಿ ಬ್ರಿಟಿಷರ ಕುತಂತ್ರಕ್ಕೆ ಬಲಿಯಾದ ಅನೇಕರಿದ್ದಾರೆ. ೧೮೪೦ ಮತ್ತು ೫೦ರ ದಶಕದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಮಡಿದವರು

ಕರ್ನಾಟಕದ ಚರಿತ್ರೆಯಲ್ಲಿ ಹೆಸರಿಸಲೇಬೇಕಾದವರೆಂದರೆ ಬಿದನೂರಿನ ಚನ್ನಬಸಪ್ಪ, ನರಗುಂದದ ಭಾಸ್ಕರ ಅಲಿಯಾಸ್ ಬಾಬಾಸಾಹೇಬ, ಮುಂಡರಗಿಯ ಭೀಮರಾಯ, ಹಮ್ಮಿಗೆ ಕೆಂಚನಗೌಡ, ಆನೆಗೊಂದಿ ಶ್ರೀರಂಗಯ್ಯ ಮುಂತಾದವರು. ರಾಷ್ಟ್ರೀಯ ಸ್ವಾತಂತ್ರ್ಯದ ಪರಿಕಲ್ಪನೆಯಿಲ್ಲದಿದ್ದರೂ ಪ್ರಾಂತೀಯ ನೆಲೆಯಲ್ಲಿ ಸ್ವಾತಂತ್ರ್ಯದ ಪಂಜನ್ನು ಉರಿಸಿದವರು.

ಸಶಸ್ತ್ರ ಬಂಡಾಯಗಳ ಹಂತದಲ್ಲಿ ಕರ್ನಾಟಕದಲ್ಲಿ ಬ್ರಿಟಿಷರ ವಿರುದ್ಧ ತಿರುಗಿಬಿದ್ದ ಇನ್ನೊಂದು ಸಮುದಾಯವೆಂದರೆ ಹಲಗಲಿಯ ಬೇಡರು. ೧೮೫೭ರ ಕಾನೂನಿನ ಪ್ರಕಾರ ಸರಕಾರದ ಅನುಮತಿ ಯಿಲ್ಲದೆ ಯಾರೂ ಶಸ್ತ್ರಗಳನ್ನು ಇಟ್ಟುಕೊಳ್ಳುವ ಹಾಗಿರಲಿಲ್ಲ. ಇಲ್ಲಿಯ ಬೇಡರಿಗೆ ಇದು ಅವಮಾನದ ಸಂಕೇತವಾಯಿತು. ಇವರು ತಮ್ಮ ಮುಖ್ಯಸ್ಥನಾದ ಗುಡುಗಿಯ ಎಂಬವನ ನೇತೃತ್ವದಲ್ಲಿ ಬ್ರಿಟಿಷ್ ಆಜ್ಞೆಯನ್ನು ಮುರಿಯಲು ತೀರ್ಮಾನಿಸಿದರು. ಇವರ ಪ್ರಯತ್ನದ ಬೆನ್ನಲ್ಲೇ ಬ್ರಿಟಿಷರು ಹಲಗಲಿಗೆ ಸೇನೆಯನ್ನು ನುಗ್ಗಿಸಿ ಇವರ ವಿರುದ್ಧ ಹೈ ಕಾರ್ಯಾಚರಣೆ ನಡೆಸಿ ಯಶಸ್ವಿಯೂ ಆದರು. ಆದರೆ ಅವರ ಹೋರಾಟದ ಕಿಡಿ ಮಾತ್ರ ಅವರಿಗೆ ಸದಾ ಉತ್ಸಾಹ ತುಂಬುವ ಶಕ್ತಿಯನ್ನು ಪಡೆದಿತ್ತು.

Tags :
Subscribe
Notify of
guest
0 Comments
Inline Feedbacks
View all comments

admin

ಇನ್ನಷ್ಟು ಸುದ್ದಿಗಳು

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

ಇತ್ತೀಚಿನಸುದ್ದಿ

ಇನ್ನೊ ಓದಿ

ಭಾರಧ್ವಾಜಾಶ್ರಮ : ವೇದಾಧ್ಯಯನಕ್ಕೊಂದು ಗುರುಕುಲ..

By Balu Deraje  ಭಾರತದ ಪ್ರಾಚೀನ ಹಿಂದು ಧರ್ಮದ ಸಾಹಿತ್ಯ ಎಂದರೆ ವೇದಗಳು ಎಂದು ಪರಿಗಣಿಸಲಾಗಿದೆ. ಇದು ಸಂಸ್ಕೃತ ದಲ್ಲಿ ರಚಿಸಲ್ಪಟ್ಟಿದೆ. ಈ ವೇದಗಳನ್ನು ವ್ಯಾಸ ಮಹರ್ಷಿಗಳು ಪಠ್ಯ ರೂಪದಲ್ಲಿ 4 ವಿಭಾಗಗಳಾಗಿ ವಿಂಗಡಿಸಿ ಇವರ ನಾಲ್ಕು ಶಿಷ್ಯರಾದವರು 1: ಋಗ್ವೇದವನ್ನು ಪೈಲ ಮಹರ್ಷಿ, 2: ಯಜುರ್ವೇದ ವನ್ನು ವೈಶಂಪಾಯನ ಮಹರ್ಷಿ, 3:ಸಾಮವೇದ ವನ್ನು ಜೈಮಿನಿ ಮಹರ್ಷಿ, 4: ಅಥರ್ವಣ ವೇದವನ್ನು ಸುಮಂತ ಮಹರ್ಷಿ ಗಳು ಪ್ರಚಾರ ಮಾಡಿದರು. ನಂತರ ಗುರುಕುಲ ಪದ್ದತಿಯು ಆರಂಭಗೊಂಡಿತು ಎಂದು ಉಲ್ಲೇಖವಿದೆ.. ನಾಡಿನ...
suvarna vidhana soudha, belgaum, legislative building

ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ

ಜುಲೈ 12ರಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 25 ರಂದು ಉಪಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ. ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ...
arrows, tendency, businesswoman

ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಫಿಚ್ ರೇಟಿಂಗ್ಸ್

ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್​ನ ಅನಿಸಿಕೆಯಾಗಿದೆ.
cricket, sports, athlete

200 ಸಿಕ್ಸರ್‌ ಪೂರ್ಣಗೊಳಿಸಿ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ

ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಆಸ್ಟ್ರೇಲಿಯಾ ವಿರುದ್ದದ ತಮ್ಮ ಕೊನೆಯ ಸೂಪರ್‌-8ರ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ ಹಾಗೂ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್ಸ್‌ 1. ರೋಹಿತ್‌ ಶರ್ಮಾ-157 ಪಂದ್ಯಗಳಿಂದ 203 ಸಿಕ್ಸರ್‌2. ಮಾರ್ಟಿನ್‌ ಗಪ್ಟಿಲ್‌-122 ಪಂದ್ಯಗಳಿಂದ 173 ಸಿಕ್ಸರ್‌3. ಜೋಸ್‌ ಬಟ್ಲರ್‌- 123 ಪಂದ್ಯಗಳಿಂದ 137 ಸಿಕ್ಸರ್‌4. ಗ್ಲೆನ್‌ ಮ್ಯಾಕ್ಸ್‌ವೆಲ್‌-113 ಪಂದ್ಯಗಳಿಂದ 133...

Get in Touch

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

Technology Partner

© Copyright 2024 – All Rights reserved

0
Would love your thoughts, please comment.x
()
x