ಭಾರತದ ಮೊದಲ ಜೈವಿಕ ಹೈಡ್ರೋಜನ್ ಯೋಜನೆ

Table of Content

ಇತ್ತೀಚೆಗೆ ಮ್ಯಾಟ್ರಿಕ್ಸ್ ಗ್ಯಾಸ್ ಅಂಡ್ ರಿನ್ಯೂವಬಲ್ಸ್ ಸಹಯೋಗದೊಂದಿಗೆ ಜೆನ್ಸೋಲ್ ಇಂಜಿನಿಯರಿಂಗ್ ನೇತೃತ್ವದಲ್ಲಿ ದೇಶದ ಮೊದಲ ಜೈವಿಕ ಹೈಡ್ರೋಜನ್ ಯೋಜನೆಯನ್ನು ಅಭಿವೃದ್ಧಿಪಡಿಸಲು ಭಾರತ ಸರ್ಕಾರವು ಒಪ್ಪಂದಕ್ಕೆ ಒಪ್ಪಿಗೆ ನೀಡಿತು. 164 ಕೋಟಿ ರೂಪಾಯಿ ಮೌಲ್ಯದ ಈ ಯೋಜನೆಯು ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ನೊಂದಿಗೆ ಹೊಂದಿಕೆಯಾಗುವ ಗುರಿಯನ್ನು ಇಟ್ಟುಕೊಂಡಿದೆ. ಮತ್ತು ಪ್ರತಿದಿನ 25 ಟನ್ ಜೈವಿಕ ತ್ಯಾಜ್ಯವನ್ನು ಸಂಸ್ಕರಿಸಲು ಸಜ್ಜಾಗಿದೆ. 18 ತಿಂಗಳುಗಳಲ್ಲಿ ಸುಧಾರಿತ ಅನಿಲೀಕರಣ ತಂತ್ರಜ್ಞಾನವನ್ನು ಬಳಸಿಕೊಂಡು ಒಂದು ಟನ್ ಹಸಿರು ಹೈಡ್ರೋಜನ್ ಅನ್ನು ಉತ್ಪಾದಿಸುವ ನಿರೀಕ್ಷೆಯಿದೆ.

ಏನಿದು ಜೈವಿಕ ಹೈಡ್ರೋಜನ್?

ಜೈವಿಕ ಹೈಡ್ರೋಜನ್ ಸಸ್ಯಗಳು, ಆಹಾರ ತ್ಯಾಜ್ಯ ಅಥವಾ ಕೆಲವು ಸೂಕ್ಷ್ಮಜೀವಿಗಳಂತಹ ಸಾವಯವ ವಸ್ತುಗಳಿಂದ ಉತ್ಪತ್ತಿಯಾಗುವ ಒಂದು ರೀತಿಯ ಹೈಡ್ರೋಜನ್ ಆಗಿದೆ. ಸಾಂಪ್ರದಾಯಿಕ ಹೈಡ್ರೋಜನ್ ಗಳಿಗಿಂತ ಭಿನ್ನವಾಗಿ, ಸಾಮಾನ್ಯವಾಗಿ ಕಲ್ಲಿದ್ದಲು ಅಥವಾ ನೈಸರ್ಗಿಕ ಅನಿಲದಂತಹ ಪಳೆಯುಳಿಕೆ ಇಂಧನಗಳಿಂದ ತಯಾರಿಸಲಾಗುತ್ತದೆ. ಜೈವಿಕ ಹೈಡ್ರೋಜನ್ ಕೃಷಿ ಉತ್ಪನ್ನಗಳು, ಆಹಾರದ ಅವಶೇಷಗಳು ಮತ್ತು ಕೈಗಾರಿಕಾ ತ್ಯಾಜ್ಯದಂತಹ ನೈಸರ್ಗಿಕ ಮೂಲಗಳಿಂದ ದೊರೆಯುತ್ತದೆ. ಇದು ಸ್ವಚ್ಛ ಮತ್ತು ಹೆಚ್ಚು ಪರಿಸರಸ್ನೇಹಿಯಾಗಿದೆ. ಜೈವಿಕ ಹೈಡ್ರೋಜನ್ ಉತ್ಪಾದಿಸಲು ವಿವಿಧ ಮಾರ್ಗಗಳಿವೆ. ಅವುಗಳೆಂದರೆ ಬಯೋಫೋಟೋಲಿಸ್ ಮತ್ತು ಡಾರ್ಕ್ ಫರ್ಮಂಟೇಶನ್.

ಬಯೋಫೋಟೋಲೀಸ್ : ಈ ವಿಧಾನವು ಪಾರ್ಚಿ ಅಂತಹ ಜೀವಿಗಳಲ್ಲಿ ನೀರಿನ ಅಣುಗಳನ್ನು ವಿಭಜಿಸಲು ಸೂರ್ಯನ ಬೆಳಕನ್ನು ಬಳಸುತ್ತದೆ, ಹೈಡ್ರೋಜನ್ ಅನ್ನು ಬಿಡುಗಡೆ ಮಾಡುತ್ತದೆ.

ಡಾರ್ಕ್ ಫರ್ಮಂಟೇಶನ್: ಇಲ್ಲಿ, ಬ್ಯಾಕ್ಟೀರಿಯಾಗಳು ಆಮ್ಲಜನಕವಿಲ್ಲದೆ ಸಾವಯವ ವಸ್ತುಗಳನ್ನು ವಿಘಟಿಸುತ್ತವೆ, ಹೈಡ್ರೋಜನ್ ಅನ್ನು ಉಪ ಉತ್ಪನ್ನವಾಗಿ ರಚಿಸುತ್ತವೆ.

ಭಾರತದ ಈ ನವೀನ ಯೋಚನೆಯಲ್ಲಿ ಜೆನ್ಸೋಲ್ ಇಂಜಿನಿಯರಿಂಗ್ ಪ್ಲಾಸ್ಮ ಇಂಡ್ಯೂಸ್ಡ್ ರೇಡಿಯಂಟ್ ಎನರ್ಜಿ ಬೇಸ್ಡ್ ಗ್ಯಾಸ್ಫಿಕೇಶನ್ ಸಿಸ್ಟಮ್(GH2-
PREGS) ಎಂಬ ತಂತ್ರಜ್ಞಾನವನ್ನು ಬಳಸುತ್ತದೆ. ಮುಂದುವರಿದ ಪ್ರಕ್ರಿಯೆಯು ಕಾರ್ಬನ್ ಆಧಾರಿತ ತ್ಯಾಜ್ಯವನ್ನು ಹೈಡ್ರೋಜನ್ ಅನಿಲವಾಗಿ ಪರಿವರ್ತಿಸುತ್ತದೆ.

ಭಾರತಕ್ಕೆ ಜೈವಿಕ ಹೈಡ್ರೋಜನ್ ಏಕೆ ಮುಖ್ಯ?

ಭಾರತವು ಪಳೆಯುಳಿಕೆ ಇಂಧನಗಳಾದ ಪೆಟ್ರೋಲ್, ಡೀಸೆಲ್ಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಹಸಿರು ಶಕ್ತಿ ಸಂಪನ್ಮೂಲಗಳನ್ನು ಉತ್ಪಾದಿಸಲು ಮತ್ತು ಬಳಸಲು ಶ್ರಮಿಸುತ್ತಿದೆ. ಇದನ್ನು ಬೆಂಬಲಿಸುವ ಪ್ರಮುಖ ಉಪಕ್ರಮಗಳಲ್ಲಿ ಈ ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಕೂಡ ಒಂದು. ಭಾರತವು ಪ್ರತಿ ವರ್ಷ ಬೃಹತ್ ಪ್ರಮಾಣದ ಕೃಷಿ ತ್ಯಾಜ್ಯವನ್ನು ಉತ್ಪಾದಿಸುತ್ತದೆ. ಜೈವಿಕ ಹೈಡ್ರೋಜನ್ ಶುದ್ಧ ಶಕ್ತಿಯನ್ನು ರಚಿಸಲು ಆ ತ್ಯಾಜ್ಯವನ್ನು ಬಳಸಲು ಒಂದು ಮಾರ್ಗವನ್ನು ಒದಗಿಸುತ್ತದೆ. ಈ ವಿಧಾನವು ಪರಿಸರ ಮಾಲಿನ್ಯವನ್ನು ಕಡಿಮೆ ಮಾಡುವುದಲ್ಲದೆ, ಉಕ್ಕು ಮತ್ತು ಸಿಮೆಂಟ್ ನಂತಹ ಉದ್ಯಮಗಳನ್ನು ಬೆಂಬಲಿಸುತ್ತದೆ. ಕೋಟಿ ಅದು ಅವುಗಳ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಬಯಸುತ್ತದೆ.

ಜೈವಿಕ ಹೈಡ್ರೋಜನ್ ತಲಿಯವಾಗಿ ಈ ಸ್ಥಾವರಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಸಮುದಾಯ ಗಳಿಗೆ ಸಹಾಯ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಕೃಷಿ ತ್ಯಾಜ್ಯವನ್ನು ಶಕ್ತಿಯನ್ನಾಗಿ ಪರಿವರ್ತಿಸುತ್ತದೆ. ಜೊತೆಗೆ ಉದ್ಯೋಗಗಳು ಮತ್ತು ಶುದ್ಧ ಶಕ್ತಿಯ ಮೂಲಗಳನ್ನು ಒದಗಿಸುತ್ತದೆ.

ಭಾರತದ ಜೈವಿಕ ಹೈಡ್ರೋಜನ್ ವಲಯಕ್ಕೆ ಇರುವ ಅವಕಾಶಗಳು

ಭಾರತವು ಪ್ರತಿ ವರ್ಷ ಸುಮಾರು 380 ಮಿಲಿಯನ್ ಟನ್ಗಳಷ್ಟು ಕೃಷಿ ತ್ಯಾಜ್ಯವನ್ನು ಉತ್ಪಾದಿಸುತ್ತದೆ. ಇದು ಜೈವಿಕ ಹೈಡ್ರೋಜನ್ ಉತ್ಪಾದನೆಗೆ ದೊಡ್ಡ ಅವಕಾಶವನ್ನು ಒದಗಿಸುತ್ತದೆ. ಸ್ಟ್ಯಾಚ್ಯವನ್ನು ಶುದ್ಧ ಶಕ್ತಿಯನ್ನಾಗಿ ಪರಿವರ್ತಿಸುವುದರಿಂದ ಮಾಲಿನ್ಯವನ್ನು ಕಡಿಮೆ ಮಾಡಬಹುದು ಮತ್ತು ಹಸಿರು ಭವಿಷ್ಯಕ್ಕೆ ಕೊಡುಗೆ ನೀಡಬಹುದು. ಹೆಚ್ಚುವರಿಯಾಗಿ, ಉಕ್ಕು ಮತ್ತು ಸಿಮೆಂಟ್ ನಂತಹ ಕೈಗಾರಿಕೆಗಳನ್ನು ಪರಿಸರ ಸ್ನೇಹಿಯನ್ನಾಗಿ ಮಾಡಲು ಕಷ್ಟವಾಗಿದ್ದು ಅವುಗಳ ಹೊರ ಸೂಸುವಿಕೆಯನ್ನು ಕಡಿಮೆ ಮಾಡಲು ಜೈವಿಕ ಹೈಡ್ರೋಜನ್ ಅನ್ನು ಬಳಸಬಹುದು.

ದೆಹಲಿಯ ಭಾರತ್ ಮಂಟಪದಲ್ಲಿ ಹಮ್ಮಿಕೊಂಡಿರುವ ಹಸಿರು ಹೈಡ್ರೋಜನ್ ಕುರಿತ ಅಂತರಾಷ್ಟ್ರೀಯ ಸಮ್ಮೇಳನ ಪ್ರದರ್ಶನವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹಾರ್ದಿಕ್ ಸಿಂಗ್ ಪುರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬುಧವಾರ ಉದ್ಘಾಟಿಸಿದರು. ಈ ಪ್ರದರ್ಶನದಲ್ಲಿ ಪ್ರಪಂಚದಾದ್ಯಂತ 120ಕ್ಕೂ ಹೆಚ್ಚು ಪ್ರದರ್ಶಕರು ಆಗಮಿಸಿದ್ದು, ಹಸಿರು ಹೈಡ್ರೋಜನ್ ವಲಯದಲ್ಲಿ ತಾಂತ್ರಿಕ ಪ್ರಗತಿಗಳು ಮತ್ತು ಅವಕಾಶಗಳ ತಿಳುವಳಿಕೆ ನೀಡಲಿದ್ದಾರೆ. ನವದೆಹಲಿಯ ಭಾರತ ಮಂಟಪದಲ್ಲಿ ಸೆಪ್ಟೆಂಬರ್ 11 ರಿಂದ 13 ರವರೆಗೆ ಈ ಪ್ರದರ್ಶನ ನಡೆಯಲಿದೆ.

ಪ್ಯಾರಾಲಿಂಪಿಕ್ಸ್ 2024ರಲ್ಲಿ 29 ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ ಭಾರತ

Tags :
Subscribe
Notify of
guest
0 Comments
Inline Feedbacks
View all comments

Bharathavani News Desk

Bharathavani is a prominent Kannada news portal based in Puttur, Karnataka, dedicated to delivering comprehensive coverage of local, state, national, and international news.

ಇನ್ನಷ್ಟು ಸುದ್ದಿಗಳು

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

ಇತ್ತೀಚಿನಸುದ್ದಿ

ಇನ್ನೊ ಓದಿ

ಭಾರಧ್ವಾಜಾಶ್ರಮ : ವೇದಾಧ್ಯಯನಕ್ಕೊಂದು ಗುರುಕುಲ..

By Balu Deraje  ಭಾರತದ ಪ್ರಾಚೀನ ಹಿಂದು ಧರ್ಮದ ಸಾಹಿತ್ಯ ಎಂದರೆ ವೇದಗಳು ಎಂದು ಪರಿಗಣಿಸಲಾಗಿದೆ. ಇದು ಸಂಸ್ಕೃತ ದಲ್ಲಿ ರಚಿಸಲ್ಪಟ್ಟಿದೆ. ಈ ವೇದಗಳನ್ನು ವ್ಯಾಸ ಮಹರ್ಷಿಗಳು ಪಠ್ಯ ರೂಪದಲ್ಲಿ 4 ವಿಭಾಗಗಳಾಗಿ ವಿಂಗಡಿಸಿ ಇವರ ನಾಲ್ಕು ಶಿಷ್ಯರಾದವರು 1: ಋಗ್ವೇದವನ್ನು ಪೈಲ ಮಹರ್ಷಿ, 2: ಯಜುರ್ವೇದ ವನ್ನು ವೈಶಂಪಾಯನ ಮಹರ್ಷಿ, 3:ಸಾಮವೇದ ವನ್ನು ಜೈಮಿನಿ ಮಹರ್ಷಿ, 4: ಅಥರ್ವಣ ವೇದವನ್ನು ಸುಮಂತ ಮಹರ್ಷಿ ಗಳು ಪ್ರಚಾರ ಮಾಡಿದರು. ನಂತರ ಗುರುಕುಲ ಪದ್ದತಿಯು ಆರಂಭಗೊಂಡಿತು ಎಂದು ಉಲ್ಲೇಖವಿದೆ.. ನಾಡಿನ...
suvarna vidhana soudha, belgaum, legislative building

ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ

ಜುಲೈ 12ರಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 25 ರಂದು ಉಪಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ. ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ...
arrows, tendency, businesswoman

ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಫಿಚ್ ರೇಟಿಂಗ್ಸ್

ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್​ನ ಅನಿಸಿಕೆಯಾಗಿದೆ.
cricket, sports, athlete

200 ಸಿಕ್ಸರ್‌ ಪೂರ್ಣಗೊಳಿಸಿ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ

ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಆಸ್ಟ್ರೇಲಿಯಾ ವಿರುದ್ದದ ತಮ್ಮ ಕೊನೆಯ ಸೂಪರ್‌-8ರ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ ಹಾಗೂ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್ಸ್‌ 1. ರೋಹಿತ್‌ ಶರ್ಮಾ-157 ಪಂದ್ಯಗಳಿಂದ 203 ಸಿಕ್ಸರ್‌2. ಮಾರ್ಟಿನ್‌ ಗಪ್ಟಿಲ್‌-122 ಪಂದ್ಯಗಳಿಂದ 173 ಸಿಕ್ಸರ್‌3. ಜೋಸ್‌ ಬಟ್ಲರ್‌- 123 ಪಂದ್ಯಗಳಿಂದ 137 ಸಿಕ್ಸರ್‌4. ಗ್ಲೆನ್‌ ಮ್ಯಾಕ್ಸ್‌ವೆಲ್‌-113 ಪಂದ್ಯಗಳಿಂದ 133...

Get in Touch

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

Technology Partner

© Copyright 2024 – All Rights reserved

0
Would love your thoughts, please comment.x
()
x