ಪ್ಯಾರಿಸ್ ಒಲಿಂಪಿಕ್ಸ್ 2024 ಕ್ಕೆ ಭಾರತದ‌ ಕೆ9 ಶ್ವಾನದಳ ಭದ್ರತೆ

Table of Content

ಜುಲೈ 26 ರಿಂದ ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್ 2024 ಕ್ಕೆ ಭದ್ರತೆ ಒದಗಿಸುವ ಸಲುವಾಗಿ ಇದೇ ಮೊದಲ ಬಾರಿಗೆ ಭಾರತದ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಗೆ ಸಂಬಂಧಿಸಿದಂತೆ ವಿಶೇಷ ತರಬೇತಿ ಪಡೆದಿರುವ ಕೆ9 ಶ್ವಾನದಳ ತೆರಳಿದೆ.

ಬೆಂಗಳೂರಿನ ಸಿ.ಆರ್.ಪಿ.ಎಫ್ ಶ್ವಾನದಳ ಕೇಂದ್ರದಲ್ಲಿ ತರಬೇತಿ ಪಡೆದ ಶ್ವಾನಗಳು ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಭದ್ರತೆ ಒದಗಿಸಲು ತರಬೇತಿ ಮತ್ತು ಪರೀಕ್ಷೆಗಳನ್ನು ನಡೆಸಿದ ನಂತರ ಕೆ9 ತಂಡವನ್ನು ಆಯ್ಕೆ ಮಾಡಲಾಗಿದೆ. ಫ್ರಾನ್ಸ್ ನ ವಿವಿದೆಡೆ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟಕ್ಕೆ ಭದ್ರತೆ ನೀಡಲು ಈ ಶ್ವಾನದಳ ಜುಲೈ 10 ರಂದು ತೆರಳಿದೆ.

ಇದನ್ನೂ ಓದಿ : ಮಂಗಳೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್

ಭಾರತ ದೇಶದಲ್ಲಿ ವಿವಿಧ ಅಪರಾಧ ನಿಗ್ರಹ ಕಾರ್ಯಾಚರಣೆಗಳಲ್ಲಿ ಶ್ವಾನದಳ ಬಳಕೆಯನ್ನು ಹೆಚ್ಚಾಗಿ ಮಾಡುತ್ತಾರೆ. ಈ ಕಾರ್ಯಾಚರಣೆಗಳಲ್ಲಿ ಚುರುಕುತನ ತೋರಿ ಪತ್ತೆದಾರಿ ಕಾರ್ಯಾಚರಣೆಗಳಲ್ಲಿ ಯಶಸ್ವಿ ಪ್ರದರ್ಶನ ತೋರಿದ ಶ್ವಾನದಳಗಳ ಸಾಮಾರ್ಥ್ಯವನ್ನು ಭಾರತದಲ್ಲಿರುವ ಫ್ರಾನ್ಸ್ ರಾಯಭಾರ ಕಚೇರಿ ಗಮನಿಸಿತ್ತು. ಇದೇ ಕಾರಣದಿಂದ ಫ್ರಾನ್ಸ್ ನೆಲದಲ್ಲಿ ನಡೆಯುವ ಒಲಿಂಪಿಕ್ಸ್ ಹಾಗೂ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೆಚ್ಚುವರಿ ಭದ್ರತೆಗಾಗಿ K9 ಶ್ವಾನದಳ ಹಾಗೂ ಅವುಗಳಿಗೆ ತರಬೇತಿ ನೀಡಿರುವ ಪೋಲಿಸ್ ಅಧಿಕಾರಿಗಳ ತಂಡವನ್ನು ಕಳುಹಿಸಿ ಕೊಡುವಂತೆ ಭಾರತದದಲ್ಲಿರುವ ಫ್ರಾನ್ಸ್ ರಾಯಭಾರ ಕಚೇರಿ ಭಾರತ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಮನವಿಗೆ ಸ್ಪಂದಿಸಿದ ಭಾರತ ಸರ್ಕಾರ ಆಗಸ್ಟ್ 12 ರವರೆಗೆ ಪ್ಯಾರಿಸ್ನಲ್ಲಿ ನಡೆಯುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಭದ್ರತೆ ಒದಗಿಸಲು K9 ಪಡೆಯ ಚುರುಕುತನದ ಶ್ವಾನಗಳು ಹಾಗೂ ಪೋಲಿಸ್ ಸಿಬ್ಬಂದಿಗಳನ್ನು ಕಳುಹಿಸಿ ಕೊಡಲು ಮುಂದಾಗಿದೆ.

ಪ್ಯಾರಿಸ್ ಒಲಿಂಪಿಕ್ಸ್ ಗೆ ತೆರಳುವ ಭದ್ರತಾ ಪಡೆಗಳ ತಂಡಗಳಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿ.ಆರ್.ಪಿ.ಎಫ್), ಕೇಂದ್ರೀಯ ಸಶಸ್ತ್ರ ಪೋಲಿಸ್ ಪಡೆಗಳು(ಸಿ.ಎ.ಪಿ.ಎಫ್), ಇಂಡೋ ಟಿಬೆಟ್ ಗಡಿ ಪೋಲಿಸ್(ಐ.ಟಿ.ಬಿ‌.ಪಿ), ಸಶಸ್ತ್ರ ಸೀಮ ಬಲ(ಎಸ್.ಎಸ್.ಬಿ), ಅಸ್ಸಾಂ ರೈಫಲ್ಸ್ ಮತ್ತು ರಾಷ್ಟ್ರೀಯ ಭದ್ರತಾ ದಳದ(ಎನ್.ಎಸ್.ಜಿ) 10 ಕೆ9 ಶ್ವಾನಗಳು ಹಾಗೂ ಶ್ವಾನದಳ ನಿರ್ವಹಣೆಯ 17 ಸಿಬ್ಬಂದಿಗಳು ನಿಯೋಜನೆಗೊಂಡಿದ್ದಾರೆ.

ಇದನ್ನೂ ಓದಿ : ಅಂಚೆ ಕಚೇರಿಯಲ್ಲಿ ಉತ್ತಮ ಬಡ್ಡಿದರ ಸಿಗುವ ಯೋಜನೆಗಳ ಮಾಹಿತಿ ಇಲ್ಲಿದೆ!

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಹೆಚ್ಚುವರಿ ಭದ್ರತೆಗಾಗಿ ನಿಯೋಜನೆಗೊಂಡಿರುವ ಶ್ವಾನದಳದಲ್ಲಿ ಬೇರೆ ಬೇರೆ ತಳಿಯ ಶ್ವಾನಗಳು ಇವೆ. ಕೆ9 ಶ್ವಾನದಳದ ಬೆಲ್ಜಿಯನ್ ಶೆಫರ್ಡ್ ಮಾಲಿನೋಯಿಸ್ ತಳಿಯ 5 ವರ್ಷ ಪ್ರಾಯದ ವಾಸ್ಟ್ ಮತ್ತು 3 ವರ್ಷದ ಡೆನ್ಬೈ ಶ್ವಾನಗಳನ್ನು ಆರಿಸಲಾಗಿದೆ. ಇದರ ಜೊತೆಗೆ ಆರು ಬೆಲ್ಜಿಯನ್ ಮೆಲನೆಸ್, ಮೂರು ಜರ್ಮನ್ ಶೆಫರ್ಡ್ ಮತ್ತು ಒಂದು ಲ್ಯಾಬ್ರಡಾರ್ ರಿಟ್ರೈವರ್ ತಳಿಗಳ 10 ನಾಯಿಗಳನ್ನು ಆಯ್ಕೆ ಮಾಡಲಾಗಿದೆ. ಹೆಚ್ಚಿನ ತರಬೇತಿ ಪಡೆದ ಈ ಶ್ವಾನಗಳು ಕ್ರೀಡಾಕೂಟದಲ್ಲಿ ಭಾಗವಹಿಸುವ ಪ್ರತಿಯೊಬ್ಬರ ಸುರಕ್ಷತೆಯನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಕೆ9 ತಂಡಗಳು ಸ್ಫೋಟಕಗಳು, ಮದ್ದು ಗುಂಡುಗಳು ಮತ್ತು ಮಾದಕ ವಸ್ತುಗಳನ್ನು ಪತ್ತೆ ಹಚ್ಚುವ ಸಾಮರ್ಥ್ಯವನ್ನು ಹೊಂದಿವೆ.

ಕೆ9 ಶ್ವಾನಗಳು ಕಳೆದ ವರ್ಷ ಭಾರತದ ನೆಲದಲ್ಲಿ ನಡೆದ ಜಿ-20 ಶೃಂಗಸಭೆಯ ಸಂದರ್ಭದಲ್ಲಿ ತೋರಿದ ಅಭೂತಪೂರ್ವ ಸಾಮರ್ಥ್ಯವನ್ನು ಎಲ್ಲರೂ ಕೊಂಡಾಡಿದ್ದರು. ಭಾರತವನ್ನು ಬಿಟ್ಟು ವಿದೇಶದಲ್ಲಿ ಈ ಶ್ವಾನದಳ ಇದೇ ಮೊದಲ ಬಾರಿಗೆ ಕರ್ತವ್ಯ ನಿರ್ವಹಿಸುತ್ತಿರುವುದು. ಏನೇ ಆಗಲಿ ನಮ್ಮ ದೇಶದ ಅದರಲ್ಲೂ ನಮ್ಮ ಬೆಂಗಳೂರಿನಲ್ಲಿ ತರಬೇತಿ ಪಡೆದ ಶ್ವಾನದಳ ವಿದೇಶದ ರಕ್ಷಣಾ ಕಾರ್ಯಾಚರಣೆಗೆ ತೆರಳುತ್ತಿರುವುದು ಹೆಮ್ಮೆಯ ವಿಷಯ. ಚುರುಕುತನ, ತೀಕ್ಷ್ಣಮತಿ, ಆಕ್ರಮಣಶೀಲತೆಗೆ ಹೆಸರಾದ ಈ ಶ್ವಾನಗಳು ಭಾರತದ ರಕ್ಷಣಾ ಪಡೆಗಳ ಜೊತೆಗೆ ದೇಶಸೇವೆ ಮಾಡುತ್ತಿರುವುದಕ್ಕೆ ಎಷ್ಟೇ ಸಲಾಂ ಸಲ್ಲಿಸಿದರೂ ಕಡಿಮೆಯೇ ಅಲ್ವಾ…!!??

Tags :
Subscribe
Notify of
guest
1 Comment
Oldest
Newest Most Voted
Inline Feedbacks
View all comments
Jeevan Gowdru
Jeevan Gowdru
1 month ago

Nice article

Bharathavani News Desk

Bharathavani is a prominent Kannada news portal based in Puttur, Karnataka, dedicated to delivering comprehensive coverage of local, state, national, and international news.

ಇನ್ನಷ್ಟು ಸುದ್ದಿಗಳು

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

ಇತ್ತೀಚಿನಸುದ್ದಿ

ಇನ್ನೊ ಓದಿ

ಭಾರಧ್ವಾಜಾಶ್ರಮ : ವೇದಾಧ್ಯಯನಕ್ಕೊಂದು ಗುರುಕುಲ..

By Balu Deraje  ಭಾರತದ ಪ್ರಾಚೀನ ಹಿಂದು ಧರ್ಮದ ಸಾಹಿತ್ಯ ಎಂದರೆ ವೇದಗಳು ಎಂದು ಪರಿಗಣಿಸಲಾಗಿದೆ. ಇದು ಸಂಸ್ಕೃತ ದಲ್ಲಿ ರಚಿಸಲ್ಪಟ್ಟಿದೆ. ಈ ವೇದಗಳನ್ನು ವ್ಯಾಸ ಮಹರ್ಷಿಗಳು ಪಠ್ಯ ರೂಪದಲ್ಲಿ 4 ವಿಭಾಗಗಳಾಗಿ ವಿಂಗಡಿಸಿ ಇವರ ನಾಲ್ಕು ಶಿಷ್ಯರಾದವರು 1: ಋಗ್ವೇದವನ್ನು ಪೈಲ ಮಹರ್ಷಿ, 2: ಯಜುರ್ವೇದ ವನ್ನು ವೈಶಂಪಾಯನ ಮಹರ್ಷಿ, 3:ಸಾಮವೇದ ವನ್ನು ಜೈಮಿನಿ ಮಹರ್ಷಿ, 4: ಅಥರ್ವಣ ವೇದವನ್ನು ಸುಮಂತ ಮಹರ್ಷಿ ಗಳು ಪ್ರಚಾರ ಮಾಡಿದರು. ನಂತರ ಗುರುಕುಲ ಪದ್ದತಿಯು ಆರಂಭಗೊಂಡಿತು ಎಂದು ಉಲ್ಲೇಖವಿದೆ.. ನಾಡಿನ...
suvarna vidhana soudha, belgaum, legislative building

ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ

ಜುಲೈ 12ರಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 25 ರಂದು ಉಪಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ. ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ...
arrows, tendency, businesswoman

ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಫಿಚ್ ರೇಟಿಂಗ್ಸ್

ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್​ನ ಅನಿಸಿಕೆಯಾಗಿದೆ.
cricket, sports, athlete

200 ಸಿಕ್ಸರ್‌ ಪೂರ್ಣಗೊಳಿಸಿ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ

ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಆಸ್ಟ್ರೇಲಿಯಾ ವಿರುದ್ದದ ತಮ್ಮ ಕೊನೆಯ ಸೂಪರ್‌-8ರ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ ಹಾಗೂ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್ಸ್‌ 1. ರೋಹಿತ್‌ ಶರ್ಮಾ-157 ಪಂದ್ಯಗಳಿಂದ 203 ಸಿಕ್ಸರ್‌2. ಮಾರ್ಟಿನ್‌ ಗಪ್ಟಿಲ್‌-122 ಪಂದ್ಯಗಳಿಂದ 173 ಸಿಕ್ಸರ್‌3. ಜೋಸ್‌ ಬಟ್ಲರ್‌- 123 ಪಂದ್ಯಗಳಿಂದ 137 ಸಿಕ್ಸರ್‌4. ಗ್ಲೆನ್‌ ಮ್ಯಾಕ್ಸ್‌ವೆಲ್‌-113 ಪಂದ್ಯಗಳಿಂದ 133...

Get in Touch

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

Technology Partner

© Copyright 2024 – All Rights reserved

1
0
Would love your thoughts, please comment.x
()
x