ಬೆಳೆವಿಮೆ ಮಾಡಿಸಲು ಜುಲೈ 31 ಕೊನೆಯ ದಿನ

Table of Content

ರಾಜ್ಯದ ರೈತರು ಹವಾಮಾನ ವೈಪರೀತ್ಯದಿಂದ ನಾನಾ ರೀತಿಯಲ್ಲಿ ಬೆಳೆ ನಷ್ಟ ಅನುಭವಿಸುತ್ತಿದ್ದು ರೈತರ ಈ ಸಮಸ್ಯೆಗಳನ್ನು ಸ್ವಲ್ಪ ಪ್ರಮಾಣದಲ್ಲಿ ಪರಿಹರಿಸುವ ಸಲುವಾಗಿ ಬೆಳೆಗಳಿಗೆ ವಿಮೆ ಮಾಡಿಸುವ ಯೋಜನೆಯನ್ನು ಸರ್ಕಾರ ಅನುಷ್ಠಾನಗೊಳಿಸಿದೆ. ಈಗಾಗಲೇ ಸಾವಿರಾರು ರೈತರು ಅರ್ಜಿ ಸಲ್ಲಿಸಿದ್ದು ಬಾಕಿ ಇರುವ ರೈತರು ಬೆಳೆವಿಮೆ ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅಡಿಯಲ್ಲಿ ಅಡಿಕೆ, ಕಾಳು ಮೆಣಸು ಮತ್ತು ಭತ್ತ ಸೇರಿದಂತೆ ಹಲವು ಬೆಳೆಗಳ ಹಾನಿಗೆ ವಿಮಾ ಯೋಜನೆಯ ಮೂಲಕ ಪರಿಹಾರ ಪಡೆಯಲು ಅವಕಾಶವಿದೆ. ಮಲೆನಾಡು, ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಜಿಲ್ಲೆಗಳ ರೈತರಿಗೆ ಈ ಮೇಲಿನ ಬೆಳೆಗಳಿಗೆ ವಿಮೆ ಮಾಡಿಸಲು ಆದೇಶ ಹೊರಡಿಸಿದೆ.

ಬೆಳೆವಿಮೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ

ಈ ವಿಮಾ ಯೋಜನೆಗೆ ಅರ್ಜಿ ಸಲ್ಲಿಸಲು ಹತ್ತಿರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಗೆ ಭೇಟಿ ನೀಡಬೇಕಾಗಿದ್ದು ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ವಿಮಾ ನೋಂದಣಿಗೆ ಬೆಳೆ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರು ಅರ್ಹರಾಗಿರುತ್ತಾರೆ. ವಿಮಾ ನೋಂದಣಿಗೆ ರೈತರು ಕಟ್ಟಬೇಕಾದ ಪ್ರೀಮಿಯಮ್ ಮೊತ್ತ, ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳ ವಿಮಾ ಕಂತು, ವಿಮಾ ಮೊತ್ತದ ಶೇಕಡಾ 5ರಷ್ಟಿರುತ್ತದೆ. ಉಳಿದ ಬಾಕಿ ಪ್ರೀಮಿಯಮ್‌ ಅನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಭರಿಸಲಿವೆ.

ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು‌ ಜಿಲ್ಲೆಗಳಲ್ಲಿ ಬೆಳೆ ವಿಮೆ ನೋಂದಣಿಗೆ ರೈತರು ಕಟ್ಟಬೇಕಾದ ಪ್ರೀಮಿಯಮ್ ಹಣ ಅಡಿಕೆ ಬೆಳೆಗೆ ಪ್ರತೀ ಹೆಕ್ಟೇರ್ಗೆ 6400 ರೂ. ಹಾಗೂ ಕರಿಮೆಣಸು ಹೆಕ್ಟೇರಿಗೆ 2350 ರೂ. ಆಗಿರುತ್ತದೆ.

ಬೆಳೆ ವಿಮೆ ಯೋಜನೆ ಮಾಡಿಸಬೇಕಾದರೆ ರೈತರ ಜಮೀನುಗಳು FRUIT (Farmer Registration & Unified Beneficiary Information System) ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಅಲ್ಲದೆ ಬೆಳೆ ಸರ್ವೆ ಕೂಡ ಆಗಿರಬೇಕು. ರೈತರ ಹೆಸರಿನಲ್ಲಿರುವ ಜಮೀನಿನ ಪಹಣಿಯಲ್ಲಿ ಕೃಷಿಭೂಮಿಯಲ್ಲಿರುವ ಬೆಳೆಗಳ ಹೆಸರು ನಮೂದಾಗಿರಬೇಕು. ಇಲ್ಲವಾದಲ್ಲಿ ಹತ್ತಿರದ ಕಂದಾಯ ಇಲಾಖೆ ಅಥವಾ ತೋಟಗಾರಿಕಾ ಇಲಾಖೆಯ ಕಛೇರಿಗೆ ಭೇಟಿ ನೀಡಿ ಇಲಾಖೆಯ ತಂತ್ರಾಂಶದಲ್ಲಿ ಹೆಸರನ್ನು ನೋಂದಾಯಿಸುವುದು ಕಡ್ಡಾಯ.

ಇದನ್ನೂ ಓದಿ : ಕೃಷಿ ನೀರಾವರಿ ಪಂಪ್‌ಸೆಟ್‌ಗೆ ಆಧಾರ್ ಲಿಂಕ್..!

ಬೆಳೆವಿಮೆಯಂತಹ ಯೋಜನೆಯ ಪರಿಹಾರ ಪಡೆಯಲು ಆಧಾರ್ ಕಾರ್ಡ್ ಮ್ಯಾಪಿಂಗ್ ಆಗಿರಬೇಕು. ಆಧಾರ್ ಕಾರ್ಡ್ ಮ್ಯಾಪಿಂಗ್ ಎಂದರೆ ಆಧಾರ್ ಸಂಖ್ಯೆ ಜೊತೆಗೆ ಬ್ಯಾಂಕ್ ಖಾತೆಯನ್ನು ಸಂಯೋಜನೆಗೊಳಿಸುವ ಪ್ರಕ್ರಿಯೆಯಾಗಿದ್ದು NPCI (National Payment Corporation of India) ಯಿಂದ ಇದು ಸುಲಭವಾಗುತ್ತದೆ. ಅಂದರೆ ಸರ್ಕಾರದಿಂದ ರೈತರು ಪಡೆಯುವ ಪ್ರತಿಯೊಂದು ಸವಲತ್ತುಗಳ ಹಣ ವರ್ಗಾವಣೆ ನೇರವಾಗಿ ರೈತರು ಸೂಚಿಸಿದ ನಿರ್ದಿಷ್ಟ ಖಾತೆಗೆ ಜಮೆಯಾಗುತ್ತದೆ.

ಬೆಳೆ ವಿಮೆ ನೋಂದಣಿ ಮಾಡುವವರು ಪಹಣಿಗೆ ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಮೂರ್ನಾಲ್ಕು ತಿಂಗಳ ಹಿಂದೆಯೇ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ಗ್ರಾಮ ಲೆಕ್ಕಿಗರ ಕಛೇರಿಗೆ ಭೇಟಿ ನೀಡಿ ಉಚಿತವಾಗಿ ಆಧಾರ್ ಪಹಣಿ ಸೀಡಿಂಗ್ ಮಾಡಿಸಿಕೊಳ್ಳಬಹುದಾಗಿದೆ. ಇನ್ನು ಮುಂದೆ ಬೆಳೆ ವಿಮೆ ಸೇರಿದಂತೆ ಸರ್ಕಾರದ ಸಬ್ಸಿಡಿ, ಲೋನ್ ಪಡೆಯುವುದಾದರೂ ಈ ಪಹಣಿ ಆಧಾರ್ ಸೀಡಿಂಗ್ ಕಡ್ಡಾಯವಾಗಿದೆ.

ಇದನ್ನೂ ಓದಿ : ಭಾರತೀಯ ಆಹಾರ ಇಲಾಖೆ 11 ಹುದ್ದೆಗಳಿಗೆ ನೇಮಕಾತಿ 2024

ಬೆಳೆ ವಿಮೆ ಯೋಜನೆಗೆ ನೋಂದಣಿ ಮಾಡಿಸುವವರು ಹತ್ತಿರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಬೇಕಾದ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಭೇಟಿ ನೀಡಿ.

Tags :
Subscribe
Notify of
guest
0 Comments
Inline Feedbacks
View all comments

Bharathavani News Desk

Bharathavani is a prominent Kannada news portal based in Puttur, Karnataka, dedicated to delivering comprehensive coverage of local, state, national, and international news.

ಇನ್ನಷ್ಟು ಸುದ್ದಿಗಳು

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

ಇತ್ತೀಚಿನಸುದ್ದಿ

ಇನ್ನೊ ಓದಿ

ಭಾರಧ್ವಾಜಾಶ್ರಮ : ವೇದಾಧ್ಯಯನಕ್ಕೊಂದು ಗುರುಕುಲ..

By Balu Deraje  ಭಾರತದ ಪ್ರಾಚೀನ ಹಿಂದು ಧರ್ಮದ ಸಾಹಿತ್ಯ ಎಂದರೆ ವೇದಗಳು ಎಂದು ಪರಿಗಣಿಸಲಾಗಿದೆ. ಇದು ಸಂಸ್ಕೃತ ದಲ್ಲಿ ರಚಿಸಲ್ಪಟ್ಟಿದೆ. ಈ ವೇದಗಳನ್ನು ವ್ಯಾಸ ಮಹರ್ಷಿಗಳು ಪಠ್ಯ ರೂಪದಲ್ಲಿ 4 ವಿಭಾಗಗಳಾಗಿ ವಿಂಗಡಿಸಿ ಇವರ ನಾಲ್ಕು ಶಿಷ್ಯರಾದವರು 1: ಋಗ್ವೇದವನ್ನು ಪೈಲ ಮಹರ್ಷಿ, 2: ಯಜುರ್ವೇದ ವನ್ನು ವೈಶಂಪಾಯನ ಮಹರ್ಷಿ, 3:ಸಾಮವೇದ ವನ್ನು ಜೈಮಿನಿ ಮಹರ್ಷಿ, 4: ಅಥರ್ವಣ ವೇದವನ್ನು ಸುಮಂತ ಮಹರ್ಷಿ ಗಳು ಪ್ರಚಾರ ಮಾಡಿದರು. ನಂತರ ಗುರುಕುಲ ಪದ್ದತಿಯು ಆರಂಭಗೊಂಡಿತು ಎಂದು ಉಲ್ಲೇಖವಿದೆ.. ನಾಡಿನ...
suvarna vidhana soudha, belgaum, legislative building

ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ

ಜುಲೈ 12ರಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 25 ರಂದು ಉಪಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ. ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ...
arrows, tendency, businesswoman

ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಫಿಚ್ ರೇಟಿಂಗ್ಸ್

ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್​ನ ಅನಿಸಿಕೆಯಾಗಿದೆ.
cricket, sports, athlete

200 ಸಿಕ್ಸರ್‌ ಪೂರ್ಣಗೊಳಿಸಿ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ

ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಆಸ್ಟ್ರೇಲಿಯಾ ವಿರುದ್ದದ ತಮ್ಮ ಕೊನೆಯ ಸೂಪರ್‌-8ರ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ ಹಾಗೂ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್ಸ್‌ 1. ರೋಹಿತ್‌ ಶರ್ಮಾ-157 ಪಂದ್ಯಗಳಿಂದ 203 ಸಿಕ್ಸರ್‌2. ಮಾರ್ಟಿನ್‌ ಗಪ್ಟಿಲ್‌-122 ಪಂದ್ಯಗಳಿಂದ 173 ಸಿಕ್ಸರ್‌3. ಜೋಸ್‌ ಬಟ್ಲರ್‌- 123 ಪಂದ್ಯಗಳಿಂದ 137 ಸಿಕ್ಸರ್‌4. ಗ್ಲೆನ್‌ ಮ್ಯಾಕ್ಸ್‌ವೆಲ್‌-113 ಪಂದ್ಯಗಳಿಂದ 133...

Get in Touch

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

Technology Partner

© Copyright 2024 – All Rights reserved

0
Would love your thoughts, please comment.x
()
x