ಮೌಂಟ್ ಎಲ್ಬ್ರಸ್ ಮೇಲೆ ಭಾರತೀಯ ಧ್ವಜ ಹಾರಿಸಿದ ಕೊಡಗಿನ ಪ್ರೀತ್ ಅಪ್ಪಯ್ಯ

Table of Content

ಯುರೋಪ್ ಮತ್ತು ರಷ್ಯಾದ ಅತ್ಯುನ್ನತ ಶಿಖರವಾದ ಮೌಂಟ್ ಎಲ್ಬ್ರಸ್ ಮೇಲೆ ಭಾರತೀಯದ್ವಜವನ್ನು ಹಾರಿಸುವ ಮೂಲಕ ಕೊಡಗಿನ ಪರ್ವತಾರೋಹಿ ಮಹಿಳೆಯೊಬ್ಬರು ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ. 

ಮೂಲತಃ ಕೊಡಗು ಜಿಲ್ಲೆಯ ಗೋಣಿಕೊಪ್ಪದವರಾದ ಪ್ರೀತ್ ಅಪ್ಪಯ್ಯ ಅವರೇ ಈ ಸಾಧನೆಯನ್ನು ಮಾಡಿದ ಛಲಗಾತಿ ಹೆಣ್ಣುಮಗಳು. 

5642 ಮೀಟರ್ ಎತ್ತರದ ಶಿಖರ

ತಮ್ಮ ಅಸಾಧಾರಣ ಪರ್ವತಾರೋಹಣ ಕೌಶಲ್ಯ ಮತ್ತು ದೇಶಭಕ್ತಿಯ ಮನೋಭಾವವನ್ನು ಪ್ರದರ್ಶಿಸುವ ಮೂಲಕ ಪ್ರೀತ್ ಅಪ್ಪಯ್ಯ ಅವರು 5642 ಮೀಟರ್ ಎತ್ತರದ ಶಿಖರವನ್ನು ಯಶಸ್ವಿಯಾಗಿ ಏರುವುದರೊಂದಿಗೆ, ಭಾರತದ ಸ್ವಾತಂತ್ರ್ಯ ದಿನಾಚರಣೆಯ ಸವಿನೆನಪಿಗಾಗಿ ಅಲ್ಲಿ ನಮ್ಮ ಭಾರತೀಯ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. 

ಪರ್ವತಾರೋಹಣದ ಇತಿಹಾಸದಲ್ಲಿ ಇದು ಆಕೆಯ ಎರಡನೆಯ ಸಾಧನೆಯಾಗಿದ್ದು, 2023 ರಲ್ಲಿ ಅವರು 5895 ಮೀಟರ್ (19,340 ಅಡಿ) ಎತ್ತರವಿರುವ ಆಫ್ರಿಕಾದ ಅತಿ ಎತ್ತರದ ಪರ್ವತ ಶಿಖರವಾದ ಮೌಂಟ್ ಕಿಲಿಮಂಜಾರೊವನ್ನು ಏರಿದ್ದರು. 

ಇನ್ನೂ ಓದಿ : ಅನಕ್ಷರಸ್ಥ ಗ್ರಾಮ ಪಂಚಾಯತ್ ಸದಸ್ಯರಿಗೆ ಅಕ್ಷರ ಕಲಿಸುವ “ಸಾಕ್ಷರ ಸಮ್ಮಾನ್” ಯೋಜನೆ

ಪ್ರಸಕ್ತ ಮೈಸೂರಿನ ಬನ್ನಿಮಂಟಪದಲ್ಲಿ ನೆಲೆಸಿರುವ ಪ್ರೀತ್ ಅಪ್ಪಯ್ಯ, ಆಗಸ್ಟ್ 9ರಂದು 11 ಮಂದಿ ಸದಸ್ಯರೊಂದಿಗೆ ಮೈಸೂರಿನಿಂದ ಹೊರಟು ಮರುದಿನ ರಷ್ಯಾಕ್ಕೆ ತಲುಪಿದ್ದರು. ಆಗಸ್ಟ್ 11ರಂದು ಅವರು 4,120 ಮೀಟರ್ ಎತ್ತರದ ಮಾಲಿಬ್ಡಿನಂ ಪರ್ವತವನ್ನು ಏರುವ ಚಾರಣವನ್ನು ಆರಂಭಿಸಿದರು ಈ ಚಾರಣದ ನಂತರ ಅವರು ಎಲ್ಬ್ರೆಸ್ ಗ್ರಾಮಕ್ಕೆ ತೆರಳಿದರು. ಮತ್ತು ಪಾಸ್ತುಖೋವ್ ರಾಕ್ಸ್ ನಲ್ಲಿ ಎರಡು ದಿನಗಳನ್ನು ಕಳೆದರು.

ಮೌಂಟ್ ಎಲ್ಬ್ರಸ್ ಅನ್ನು ಏರುವ ನಿರ್ಣಾಯಕ ಆರೋಹಣವು ಆಗಸ್ಟ್ 16ರ ಮಧ್ಯರಾತ್ರಿ ಆರಂಭಗೊಂಡು ಆಗಸ್ಟ್ 15ರ ಬೆಳಿಗ್ಗೆ ಏಳು ಇಪ್ಪತ್ತಕ್ಕೆ ಅಂದರೆ 7 ಗಂಟೆ 20 ನಿಮಿಷದಲ್ಲಿ ನಿಗದಿತ ಗುರಿ ತಲುಪುವ ಮೂಲಕ ಅಲ್ಲಿ ಭಾರತದ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಕೊನೆಗೊಂಡಿತು.

ಗೋಣಿಕೊಪ್ಪದ ವಕೀಲ ಜಮ್ಮಡ ಎಂ ಅಣ್ಣಯ್ಯ ಅವರ ಪತ್ನಿಯಾಗಿರುವ ಪ್ರೀತ್ ಅವರು, ದಿ. ಕುಞಿಯಂಡ ಅಪ್ಪಯ್ಯ ಮತ್ತು ಗೌರಮ್ಮ ದಂಪತಿಯ ಪುತ್ರಿ ಯಾಗಿದ್ದು ಪ್ರಥಮ್ ಪೂಣಚ್ಚ ಹಾಗೂ ಆರ್ಯನ್ ಕುಟ್ಟಪ್ಪ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ ಇವರ ಸಹೋದರ ಕುಞಿಯಂಡ ಮಾಚಯ್ಯ ಅವರು ವನ್ಯಜೀವ ಛಾಯಾಗ್ರಾಹಕರಾಗಿದ್ದಾರೆ.

Tags :
Subscribe
Notify of
guest
0 Comments
Inline Feedbacks
View all comments

Bharathavani News Desk

Bharathavani is a prominent Kannada news portal based in Puttur, Karnataka, dedicated to delivering comprehensive coverage of local, state, national, and international news.

ಇನ್ನಷ್ಟು ಸುದ್ದಿಗಳು

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

ಇತ್ತೀಚಿನಸುದ್ದಿ

ಇನ್ನೊ ಓದಿ

ಭಾರಧ್ವಾಜಾಶ್ರಮ : ವೇದಾಧ್ಯಯನಕ್ಕೊಂದು ಗುರುಕುಲ..

By Balu Deraje  ಭಾರತದ ಪ್ರಾಚೀನ ಹಿಂದು ಧರ್ಮದ ಸಾಹಿತ್ಯ ಎಂದರೆ ವೇದಗಳು ಎಂದು ಪರಿಗಣಿಸಲಾಗಿದೆ. ಇದು ಸಂಸ್ಕೃತ ದಲ್ಲಿ ರಚಿಸಲ್ಪಟ್ಟಿದೆ. ಈ ವೇದಗಳನ್ನು ವ್ಯಾಸ ಮಹರ್ಷಿಗಳು ಪಠ್ಯ ರೂಪದಲ್ಲಿ 4 ವಿಭಾಗಗಳಾಗಿ ವಿಂಗಡಿಸಿ ಇವರ ನಾಲ್ಕು ಶಿಷ್ಯರಾದವರು 1: ಋಗ್ವೇದವನ್ನು ಪೈಲ ಮಹರ್ಷಿ, 2: ಯಜುರ್ವೇದ ವನ್ನು ವೈಶಂಪಾಯನ ಮಹರ್ಷಿ, 3:ಸಾಮವೇದ ವನ್ನು ಜೈಮಿನಿ ಮಹರ್ಷಿ, 4: ಅಥರ್ವಣ ವೇದವನ್ನು ಸುಮಂತ ಮಹರ್ಷಿ ಗಳು ಪ್ರಚಾರ ಮಾಡಿದರು. ನಂತರ ಗುರುಕುಲ ಪದ್ದತಿಯು ಆರಂಭಗೊಂಡಿತು ಎಂದು ಉಲ್ಲೇಖವಿದೆ.. ನಾಡಿನ...
suvarna vidhana soudha, belgaum, legislative building

ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ

ಜುಲೈ 12ರಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 25 ರಂದು ಉಪಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ. ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ...
arrows, tendency, businesswoman

ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಫಿಚ್ ರೇಟಿಂಗ್ಸ್

ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್​ನ ಅನಿಸಿಕೆಯಾಗಿದೆ.
cricket, sports, athlete

200 ಸಿಕ್ಸರ್‌ ಪೂರ್ಣಗೊಳಿಸಿ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ

ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಆಸ್ಟ್ರೇಲಿಯಾ ವಿರುದ್ದದ ತಮ್ಮ ಕೊನೆಯ ಸೂಪರ್‌-8ರ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ ಹಾಗೂ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್ಸ್‌ 1. ರೋಹಿತ್‌ ಶರ್ಮಾ-157 ಪಂದ್ಯಗಳಿಂದ 203 ಸಿಕ್ಸರ್‌2. ಮಾರ್ಟಿನ್‌ ಗಪ್ಟಿಲ್‌-122 ಪಂದ್ಯಗಳಿಂದ 173 ಸಿಕ್ಸರ್‌3. ಜೋಸ್‌ ಬಟ್ಲರ್‌- 123 ಪಂದ್ಯಗಳಿಂದ 137 ಸಿಕ್ಸರ್‌4. ಗ್ಲೆನ್‌ ಮ್ಯಾಕ್ಸ್‌ವೆಲ್‌-113 ಪಂದ್ಯಗಳಿಂದ 133...

Get in Touch

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

Technology Partner

© Copyright 2024 – All Rights reserved

0
Would love your thoughts, please comment.x
()
x