ಅನಕ್ಷರಸ್ಥ ಗ್ರಾಮ ಪಂಚಾಯತ್ ಸದಸ್ಯರಿಗೆ ಅಕ್ಷರ ಕಲಿಸುವ “ಸಾಕ್ಷರ ಸಮ್ಮಾನ್” ಯೋಜನೆ

Table of Content

ಹಲವು ವರ್ಷಗಳ ಹಿಂದೆ ಅನಕ್ಷರಸ್ಥ ಜನರಿಗೆ ಅಕ್ಷರ ಕಲಿಸುವ ರಾತ್ರಿ ಶಿಕ್ಷಣವೊಂದು ಜಾರಿಯಲ್ಲಿತ್ತು. ದೀಪದ ಬೆಳಕಿನಡಿಯಲ್ಲಿ ಕುಳಿತು ಆಸಕ್ತರು ಅಕ್ಷರಸ್ಥರಿಂದ ವಿದ್ಯಾಭ್ಯಾಸ ಕಲಿಯುತ್ತಿದ್ದರು. ಇದರಿಂದಾಗಿ ಹೆಬ್ಬೆಟ್ಟು ಒತ್ತುತ್ತಿದ್ದ ಅವೆಷ್ಟೋ ಜನ ಸಹಿ ಹಾಕಲು ಆರಂಭಿಸಿದ್ದರು. ಇದರಿಂದಾಗಿ ಸಾಕ್ಷರತೆಯ ಪ್ರಮಾಣ ಹೆಚ್ಚಾಗಿತ್ತು.

ಸಾಕ್ಷರತಾ ಗಣತಿಯ ಸಮೀಕ್ಷೆಯು ಇತ್ತೀಚೆಗೆ ಸುಳ್ಳಾಗಿ ಮಾರ್ಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯು ಇಡೀ ರಾಜ್ಯದಲ್ಲೇ ಹೆಚ್ಚು ಸಾಕ್ಷರತೆ ಹೊಂದಿರುವ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಸಾಕ್ಷರತಾ ಪ್ರಗತಿಗಾಗಿ ಸರ್ಕಾರವು ನಿರಂತರ ಕಾರ್ಯಕ್ರಮಗಳನ್ನು ನಡೆಸುತ್ತಲೇ ಬಂದಿದೆ. ಆದರೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗ್ರಾಮ ಪಂಚಾಯತ್ ಸದಸ್ಯರಲ್ಲಿ ಹಲವು ಜನ ಅನಕ್ಷರಸ್ಥರಿದ್ದಾರಂತೆ…!! ಸಹಿಯ ಬದಲು ಈಗಲೂ ಈ ಸದಸ್ಯರು ಹೆಬ್ಬೆಟ್ಟು ಒತ್ತುತ್ತಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ.

ಏನಿದು ಸಾಕ್ಷರ ಸಮ್ಮಾನ್..?


ಸಾಕ್ಷರ ಸಮ್ಮಾನ್ ಎಂದರೆ ಇಂದಿಗೂ ಸಹಿ ಹಾಕಲು ಬಾರದ ಅನಕ್ಷರಸ್ಥ ಗ್ರಾಮ ಪಂಚಾಯತ್ ಸದಸ್ಯರನ್ನು ಸಾಕ್ಷರರನ್ನಾಗಿ ಮಾಡಲು ಆರಂಭಿಸಲಾಗುತ್ತಿರುವ ಹೊಸ ಸಾಕ್ಷರತಾ ಯೋಜನೆ.

1990ರ ದಶಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಕ್ಷರತಾ ಆಂದೋಲನ ತ್ವರಿತವಾಗಿ ನಡೆದು ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲೇ ಹೆಚ್ಚು ಸಾಕ್ಷರ ಜನರಿರುವ ಜಿಲ್ಲೆಯಾಗಿ ಘೋಷಿಸಲ್ಪಟ್ಟಿತ್ತು. 2011ರ ಜನಗಣತಿ ಪ್ರಕಾರ ರಾಜ್ಯದ ಮೊದಲನೇ ಸಾಕ್ಷರ ಜಿಲ್ಲೆಯಾಗಿದ್ದು ಸಾಕ್ಷರರ ಪ್ರಮಾಣ ಶೇ.88ರಷ್ಟಿದೆ.

ಇದನ್ನೂ ಓದಿ: 1ನೇ ತರಗತಿ ಸೇರಲು ಗರಿಷ್ಠ ವಯೋಮಿತಿ 8 ವರ್ಷಕ್ಕೆ ಹೆಚ್ಚಳ

ಅನಕ್ಷರಸ್ಥರ ಬಗ್ಗೆ ಮಾಹಿತಿ ತಿಳಿದದ್ದು ಹೇಗೆ?


ಸಾಕ್ಷರತಾ ಜಿಲ್ಲೆಯೆಂಬ ಹೆಮ್ಮೆಯ ಕಿರೀಟ ನೆಲಕ್ಕೆ ಬಿದ್ದಿದ್ದು ಹೇಗೆ ಗೊತ್ತಾ..? ಗ್ರಾಮ ಪಂಚಾಯತ್ ಸದಸ್ಯರಿಗಾಗಿ ಏರ್ಪಡಿಸಲಾಗಿದ್ದ ತರಬೇತಿ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ. ಮೈಸೂರಿನ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ಜನಪ್ರತಿನಿಧಿಗಳ ತರಬೇತಿ ಅಅಅಅಅಅವೇಳೆ ವಿವಿಧ ಜಿಲ್ಲೆಗಳ ಸದಸ್ಯರ ಚಟುವಟಿಕೆಯನ್ನು ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ(ಎಸ್.ಐ.ಆರ್.ಡಿ)ಯವರು ದಾಖಲಿಸಿಕೊಂಡಿದ್ದು, ಆಗ ಸಹಿ ಹಾಕುವ ಬದಲು ಬೆರಳಚ್ಚು ಅಂದರೆ ಹೆಬ್ಬೆಟ್ಟು ಒತ್ತಿರುವುದು ಗೊತ್ತಾಗಿದೆ. ಆದ್ದರಿಂದ ಈ ಅನಕ್ಷರಸ್ಥ ಗ್ರಾಮ ಪಂಚಾಯತ್ ಸದಸ್ಯರಿಗೆ ಸಾಕ್ಷರತೆಯ ಪಾಠ ಕಲಿಸಲು ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ 53 ಗ್ರಾಮ ಪಂಚಾಯತ್ ಗಳ 72 ಸದಸ್ಯರು ಹಾಗೂ ಉಡುಪಿ ಜಿಲ್ಲೆಯ 42 ಅನಕ್ಷರಸ್ಥ ಸದಸ್ಯರನ್ನು ಎಸ್.ಐ.ಆರ್.ಡಿ ಸಂಸ್ಥೆ ಗುರುತಿಸಿದೆ. ಇದರಲ್ಲಿ ಕೆಲವರು ಮತ್ತೆ ಅಕ್ಷರಾಭ್ಯಾಸ ಕಲಿತಿದ್ದು ಮಿಕ್ಕ ಸದಸ್ಯರಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಪುತ್ತೂರಿನಲ್ಲಿ ತರಬೇತಿಯನ್ನು ನಡೆಸಲಾಗುವುದು ಎಂದು ಜಿಲ್ಲಾ ಲೋಕ ಶಿಕ್ಷಣಾಧಿಕಾರಿ ಲೋಕೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಳೆಗಾಲದಲ್ಲಿ ವಿದ್ಯುತ್ ಬಗ್ಗೆ ಎಚ್ಚರವಿರಲಿ

ಕರ್ನಾಟಕದಾದ್ಯಂತ ಹಲವು ಗ್ರಾಮ ಪಂಚಾಯತ್ ಗಳಲ್ಲಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿದ್ದು ಬೆಳಗಾವಿ 727, ತುಮಕೂರು 328, ಚಿಕ್ಕಬಳ್ಳಾಪುರ 305, ರಾಮನಗರ 227, ಹಾಸನ 223 ಅನಕ್ಷರಸ್ಥ ಸದಸ್ಯರನ್ನು ಹೊಂದಿದೆ.

ಸಾಕ್ಷರ ಸಮ್ಮಾನ್ ಯೋಜನೆ ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡಿದ ಲೋಕಶಿಕ್ಷಣಾಧಿಕಾರಿ ಲೋಕೇಶ್ ಅವರ ಪ್ರಕಾರ “ಈಚ್ ಒನ್, ಟೀಚ್ ಒನ್” ಎಂದರೆ ಪ್ರತಿಯೊಬ್ಬನೂ ಇನ್ನೊಬ್ಬನಿಗೆ ಕಲಿಸುವುದು ಎನ್ನುವ ನೆಲೆಯಲ್ಲಿ ಆಯಾ ಗ್ರಾಮ ಪಂಚಾಯತ್ ಸಿಬ್ಬಂದಿಗಳೇ ತಮ್ಮಲ್ಲಿನ ಅನಕ್ಷರಸ್ಥ ಜನಪ್ರತಿನಿಧಿಗಳಿಗೆ ಕಲಿಸುವ ಕಾರ್ಯಕ್ರಮ ಸಾಕ್ಷರತಾ ಸಮ್ಮಾನ್. ಇದಕ್ಕಾಗಿ ಗ್ರಾಮ ಪಂಚಾಯತ್ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಹೇಳಿದ್ದಾರೆ.

Tags :
Subscribe
Notify of
guest
0 Comments
Inline Feedbacks
View all comments

Bharathavani News Desk

Bharathavani is a prominent Kannada news portal based in Puttur, Karnataka, dedicated to delivering comprehensive coverage of local, state, national, and international news.

ಇನ್ನಷ್ಟು ಸುದ್ದಿಗಳು

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

ಇತ್ತೀಚಿನಸುದ್ದಿ

ಇನ್ನೊ ಓದಿ

ಭಾರಧ್ವಾಜಾಶ್ರಮ : ವೇದಾಧ್ಯಯನಕ್ಕೊಂದು ಗುರುಕುಲ..

By Balu Deraje  ಭಾರತದ ಪ್ರಾಚೀನ ಹಿಂದು ಧರ್ಮದ ಸಾಹಿತ್ಯ ಎಂದರೆ ವೇದಗಳು ಎಂದು ಪರಿಗಣಿಸಲಾಗಿದೆ. ಇದು ಸಂಸ್ಕೃತ ದಲ್ಲಿ ರಚಿಸಲ್ಪಟ್ಟಿದೆ. ಈ ವೇದಗಳನ್ನು ವ್ಯಾಸ ಮಹರ್ಷಿಗಳು ಪಠ್ಯ ರೂಪದಲ್ಲಿ 4 ವಿಭಾಗಗಳಾಗಿ ವಿಂಗಡಿಸಿ ಇವರ ನಾಲ್ಕು ಶಿಷ್ಯರಾದವರು 1: ಋಗ್ವೇದವನ್ನು ಪೈಲ ಮಹರ್ಷಿ, 2: ಯಜುರ್ವೇದ ವನ್ನು ವೈಶಂಪಾಯನ ಮಹರ್ಷಿ, 3:ಸಾಮವೇದ ವನ್ನು ಜೈಮಿನಿ ಮಹರ್ಷಿ, 4: ಅಥರ್ವಣ ವೇದವನ್ನು ಸುಮಂತ ಮಹರ್ಷಿ ಗಳು ಪ್ರಚಾರ ಮಾಡಿದರು. ನಂತರ ಗುರುಕುಲ ಪದ್ದತಿಯು ಆರಂಭಗೊಂಡಿತು ಎಂದು ಉಲ್ಲೇಖವಿದೆ.. ನಾಡಿನ...
suvarna vidhana soudha, belgaum, legislative building

ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ

ಜುಲೈ 12ರಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 25 ರಂದು ಉಪಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ. ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ...
arrows, tendency, businesswoman

ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಫಿಚ್ ರೇಟಿಂಗ್ಸ್

ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್​ನ ಅನಿಸಿಕೆಯಾಗಿದೆ.
cricket, sports, athlete

200 ಸಿಕ್ಸರ್‌ ಪೂರ್ಣಗೊಳಿಸಿ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ

ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಆಸ್ಟ್ರೇಲಿಯಾ ವಿರುದ್ದದ ತಮ್ಮ ಕೊನೆಯ ಸೂಪರ್‌-8ರ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ ಹಾಗೂ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್ಸ್‌ 1. ರೋಹಿತ್‌ ಶರ್ಮಾ-157 ಪಂದ್ಯಗಳಿಂದ 203 ಸಿಕ್ಸರ್‌2. ಮಾರ್ಟಿನ್‌ ಗಪ್ಟಿಲ್‌-122 ಪಂದ್ಯಗಳಿಂದ 173 ಸಿಕ್ಸರ್‌3. ಜೋಸ್‌ ಬಟ್ಲರ್‌- 123 ಪಂದ್ಯಗಳಿಂದ 137 ಸಿಕ್ಸರ್‌4. ಗ್ಲೆನ್‌ ಮ್ಯಾಕ್ಸ್‌ವೆಲ್‌-113 ಪಂದ್ಯಗಳಿಂದ 133...

Get in Touch

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

Technology Partner

© Copyright 2024 – All Rights reserved

0
Would love your thoughts, please comment.x
()
x