“ಮಲೆನಾಡು ಮೂರು ಗಂತಿಕಪ್ಪೆ”ಗೆ ರಾಜ್ಯಕಪ್ಪೆಯೆಂಬ ರಾಜಯೋಗ ಸಿಗುವುದೇ…??

Table of Content

ಇಡೀ ಜಗತ್ತಿನ ಪರಿಸರ ವ್ಯವಸ್ಥೆ ವೈವಿಧ್ಯಮಯವಾಗಿ ಕೂಡಿದ್ದು ಪ್ರತಿಯೊಂದು ಜೀವಿಯೂ ತನ್ನದೇ ಮಹತ್ವವನ್ನು ಹೊಂದಿದೆ. ಜೀವಸಂಕುಲದಲ್ಲಿ ನಾನಾ ಬಗೆಯ ಜೀವಿಗಳಿದ್ದು ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಇವೆಲ್ಲದರ ಪಾಲು ಬಹು ಮುಖ್ಯ. ಯಾವುದೇ ಒಂದು ಜೀವಿ ಇನ್ನೊಂದು ಜೀವಿಯನ್ನು ಆಹಾರವಾಗಿ ಸ್ವೀಕರಿಸದೇ ಹೋದರೆ ಅವುಗಳ ಸಂತತಿ ಪ್ರಕೃತಿಗೆ ಮಾರಕವೇ ಸರಿ. ಆದರೆ ಇಂದು ಅದೆಷ್ಟೋ ಜೀವ ಪ್ರಭೇದಗಳು ನಶಿಸಿ ಹೋದರೆ ಇನ್ನೂ ಕೆಲವು ಪ್ರಭೇದಗಳು ಅಳಿವಿನಂಚಿನಲ್ಲಿದೆ.

ಜೀವಶಾಸ್ತ್ರವನ್ನು ಆಳವಾಗಿ ಅಧ್ಯಯನ ನಡೆಸಿದರೆ ಉಭಯವಾಸಿ ಜೀವಿಗಳ ಪಟ್ಟಿ ಕಾಣ ಸಿಗುತ್ತದೆ. ಅಂದರೆ ನೀರಿನಲ್ಲೂ, ಭೂಮಿಯ ಮೇಲೂ ವಾಸಿಸಲ್ಪಡುವ ಜೀವಿಗಳಿವು. ಇವುಗಳನ್ನು ಪರಿಸರ ವ್ಯವಸ್ಥೆಯ ಜೈವಿಕ ಸೂಚಕಗಳೆಂದು ಹೇಳಲಾಗುತ್ತದೆ. ಯಾಕೆಂದರೆ ಪ್ರಕೃತಿಯಲ್ಲಾಗುವ ಪ್ರತಿಯೊಂದು ಬದಲಾವಣೆಗಳನ್ನು ಬಹುಬೇಗನೆ ಗ್ರಹಿಸುವ ಶಕ್ತಿ ಈ ಉಭಯಜೀವಿಗಳಿಗಿದೆ. ಹಾಗಾಗಿಯೇ ಇವುಗಳನ್ನು ‘ಅಪಾಯದ ಮುನ್ಸೂಚನೆಯ ಜೀವಿಗಳು’ ಎಂದೂ ಕರೆಯಲಾಗುತ್ತದೆ. ಈ ಉಭಯವಾಸಿಗಳಲ್ಲಿ ಅತ್ಯಂತ ಗಮನಾರ್ಹ ಜೀವಿಯೆಂದರೆ ಕಪ್ಪೆ ಅಥವಾ ಮಂಡೂಕ. ಈ ಕಪ್ಪೆಗಳು ಕೀಟ ನಿಯಂತ್ರಕಗಳಾಗಿದ್ದು ಪರಭಕ್ಷಕ ಜೀವಿಗಳ ಆಹಾರದ ಮೂಲವೂ ಹೌದು. ಈ ಕಪ್ಪೆಗಳಲ್ಲಿ ಹಲವಾರು ಪ್ರಭೇದಗಳಿದ್ದು “ಮಲೆನಾಡು ಮರ ಗಂತಿಕಪ್ಪೆ” ವಿಶಿಷ್ಟವಾಗಿ ಗುರುತಿಸಿಕೊಳ್ಳುತ್ತದೆ. ಜನ ಸಾಮಾನ್ಯರಲ್ಲಿ ಕಪ್ಪೆಯೂ ಸೇರಿ ಉಭಯವಾಸಿಗಳ ಸಂರಕ್ಷಣೆ ಹಾಗೂ ಮಹತ್ವದ ಅರಿವು ಮೂಡಿಸಲು ನಾನಾ ಬಗೆಯ ಪ್ರಯತ್ನಗಳಲ್ಲಿ ತೊಡಗಿಕೊಂಡಿರುವ ಪ್ರಕೃತಿ ವಿಜ್ಞಾನಿಗಳು ಈಗ ‘ರಾಜ್ಯ ಕಪ್ಪೆ’ ಎಂದು ಘೋಷಣೆ ಮಾಡುವಂತೆ ಸರ್ಕಾರದ ವನ್ಯ ಜೀವಿ ಮಂಡಳಿಗೆ ಮನವಿ ಸಲ್ಲಿಸಿದ್ದಾರೆ.

ರಾಜ್ಯ ಕಪ್ಪೆ ಎಂದು ಘೋಷಿಸಲು ಕಾರಣವೇನು?

ನಮ್ಮ ಕರ್ನಾಟಕದಲ್ಲಿ ಪ್ರಸ್ತುತ ರಾಜ್ಯ ಪ್ರಾಣಿ, ಪಕ್ಷಿ, ಹೂವು, ಹಣ್ಣು, ಮರ, ಚಿಟ್ಟೆ ಎಂದು ಕೆಲವೊಂದನ್ನು ನಾಮ ನಿರ್ದೇಶನ ಮಾಡಲಾಗಿದೆ. ಇದರಿಂದ ಅವುಗಳ ಮಹತ್ವ, ಪ್ರಾಮುಖ್ಯತೆ ಹೆಚ್ಚಾಗಿದ್ದು, ಅವುಗಳ ಸಂರಕ್ಷಣೆಗೆ ಸರ್ಕಾರ ಹಾಗೂ ಜನತೆ ಕಾರ್ಯಪ್ರವೃತ್ತರಾಗಿದ್ದಾರೆ. ಅದೇ ರೀತಿ ‘ರಾಜ್ಯ ಕಪ್ಪೆ’ ಎಂದು ಗುರುತಿಸಿದರೆ ಆ ಸಣ್ಣ ಜೀವ ಪ್ರಭೇದದತ್ತ ಜನರ ಗಮನ ಹರಿದು ಅದರ ಸಂರಕ್ಷಣೆಯ ಕೆಲಸ ನಡೆಯುತ್ತದೆ. ಅಷ್ಟೇ ಅಲ್ಲದೆ ಅವುಗಳ ಬಗ್ಗೆ ಅಧ್ಯಯನ, ಸಂಶೋಧನೆಗಳೂ ಹೆಚ್ಚಾಗ ತೊಡಗುತ್ತದೆ. ಈ ಮೂಲಕ ಕಪ್ಪೆಯೂ ಸೇರಿ ಉಭಯವಾಸಿಗಳಿಗೆ ವಿಶೇಷ ಪ್ರಾಶಸ್ತ್ಯ ಸಿಗುವುದಲ್ಲದೆ ಅವುಗಳ ಸಂರಕ್ಷಣೆಯೂ ಆಗುತ್ತದೆ ಎಂಬುದು ವನ್ಯಜೀವಿ ಮಂಡಳಿಯ ಅಭಿಪ್ರಾಯ.

“ಮರ ಗಂತಿಕಪ್ಪೆಯ ವಿಶೇಷತೆಗಳೇನು?

ಸಾಮಾನ್ಯವಾಗಿ ಕಾಣಸಿಗುವ ಕಪ್ಪೆ ಹಾಗೂ ಗಂತಿಕಪ್ಪೆಗಳಲ್ಲಿ ಸಾಕಷ್ಟು ವ್ಯತ್ಯಾಸಗಳು ಕಂಡು ಬರುತ್ತದೆ. ಸಾಮಾನ್ಯ ಕಪ್ಪೆಯ ಚರ್ಮ ಲೋಲೆಯಾಗಿದ್ದು, ಹೆಚ್ಚಾಗಿ ನೀರಿನ ಪ್ರದೇಶಗಳಲ್ಲಿ ವಾಸಿಸುತ್ತವೆ. ನೆಲದ ಮೇಲೆ ಜೀವಿಸುವ ದಂತಿಕಪ್ಪೆಗಳ ಚರ್ಮ ಸ್ಯಾಂಡ್ ಪೇಪರ್ ತರಹ ಒರಟಾಗಿರುತ್ತದೆ. ಅಷ್ಟೇ ಅಲ್ಲದೆ ಈ ಕಪ್ಪೆಗಳ ಕಣ್ಣಿನ ಹಿಂಭಾಗದಲ್ಲಿ ವಿಷಕಾರಿ ಗ್ರಂಥಿಯಿದ್ದು, ಇದು ಸಾಮಾನ್ಯ ಕಪ್ಪೆಗಳಲ್ಲಿ ಇರುವುದಿಲ್ಲ. ಮಲೆನಾಡು ಪ್ರದೇಶದಲ್ಲಿ ಕಂಡು ಬರುವ ಈ ವಿಶಿಷ್ಟ ಪ್ರಭೇದಕ್ಕೆ ಗ್ರಂಥಿಯಿರುವುದರಿಂದ ಹಾಗೂ ಮರದಲ್ಲಿ ವಾಸಿಸುವುದರಿಂದ ಇದನ್ನು “ಮಲೆನಾಡು ಮೂರು ಗಂತಿಕಪ್ಪೆ” ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಕಪ್ಪೆಗಳು ಮಳೆಗಾಲದಲ್ಲಿ ಕೂಗಿದರೆ ಈ ಕಪ್ಪೆಗಳು ಮಳೆಗಾಲದ ಆರಂಭಕ್ಕೂ ಮುನ್ನವೇ ಕೂಗುತ್ತವೆ. 3.6 ರಿಂದ 3.8 ಸೆಂ.ಮೀವರೆಗೆ ಬೆಳೆಯುವ ಈ ಕಪ್ಪೆಗಳು ಜೂನ್ ಆರಂಭದ ವಾರಗಳಲ್ಲಿ ನೆಲಕ್ಕೆ ಬಂದು ಸಂತಾನೋತ್ಪತ್ತಿ ಕ್ರಿಯೆಯಲ್ಲಿ ತೊಡಗುತ್ತವೆ.

ರಾಜ್ಯ ಕಪ್ಪೆಯಾಗಿ ಮರ ಗಂತಿಕಪ್ಪೆಯನ್ನೇ ಯಾಕೆ ಆಯ್ಕೆ ಮಾಡಲು ಸೂಚಿಸಲಾಗಿದೆ?

ಮಲೆನಾಡು ಮೂರು ಗಂತಿಕಪ್ಪೆಯನ್ನೇ ರಾಜ್ಯ ಕಪ್ಪೆಯನ್ನಾಗಿ ನಾಮ ನಿರ್ದೇಶನ ಮಾಡಲು ಕೆಲವೊಂದು ಪ್ರಮುಖ ಕಾರಣಗಳಿವೆ. ಸದ್ಯಕ್ಕೆ ಇವು ಮಲೆನಾಡಿನಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದು, ಅವಸಾನದ ಅಂಚಿನಲ್ಲಿಲ್ಲ. ಜಿನಸ್ ಪಿಡೊಸ್ಟೈಬ್ ವರ್ಗಕ್ಕೆ ಸೇರಿದ ಏಕಮಾತ್ರ ಜೀವಿಯಿದಾಗಿದ್ದು 6.5 ರಿಂದ 7 ಕೋಟಿ ವರ್ಷಗಳ ಹಿಂದೆ ವಿಕಾಸಗೊಂಡಿದೆ ಎನ್ನಲಾಗಿದೆ. 1972ರ ಭಾರತೀಯ ವನ್ಯಜೀವಿ ಕಾಯ್ದೆಯ 2ನೇ ಪರಿಚ್ಛೇದದಲ್ಲಿ ಸೇರ್ಪಡೆಗೊಂಡ ಏಕೈಕ ಗಂತಿಕಪ್ಪೆ ಇದಾಗಿದೆ. ಪ್ರಸ್ತುತ ಭಾರತದಲ್ಲಿರುವ ಎಲ್ಲಾ ಗಂತಿಕಪ್ಪೆ ಜಾತಿಗಳಿಗೆ ಇದುವೇ ಆಧಾರ ಜೀವಿ. ಮುರಕಲ್ಲು ಪ್ರದೇಶ, ಪಶ್ಚಿಮ ಘಟ್ಟ, ಹರಿದ್ವರ್ಣ, ಮಿರಿಸ್ಟಿಕಾ ಜೌಗು ಕಾಡು ಹಾಗೂ ಇತರ ಸಂರಕ್ಷಿತ ವನ್ಯ ಪ್ರದೇಶಗಳು ಈ ಕಪ್ಪೆಗಳ ವಾಸಸ್ಥಳವಾಗಿದ್ದು, ಕಪ್ಪೆಗಳ ರಕ್ಷಣೆಯಿಂದ ಕಾಡುಗಳೂ ಉಳಿಯಲಿವೆ. ರಾಜ್ಯದಲ್ಲಿರುವ 115 ಉಭಯಜೀವಿಗಳಲ್ಲಿ ಮಲೆನಾಡು ಮರಗಂತಿ ಕಪ್ಪೆ ಹೊಂದಿರುವ ವೈಶಿಷ್ಟ್ಯತೆ ಮತ್ತೆ ಯಾವ ಉಭಯಜೀವಿಯೂ ಹೊಂದಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಈ ಕಪ್ಪೆಗಳು ನೈಸರ್ಗಿಕ ಪರಂಪರೆಯ ಭಾಗವಾಗಿವೆ.

ಮಲೆನಾಡು ಮರಗಂತಿ ಕಪ್ಪೆಯನ್ನು ಗುರುತಿಸಿದವರಾರು?

1875ರಲ್ಲಿ ಮೊದಲ ಬಾರಿಗೆ ಬ್ರಿಟಿಷ್ ಪ್ರಕೃತಿ ವಿಜ್ಞಾನಿ ಗುಂಥರ್ ಎಂಬವರು ಮಲಬಾರ್ ಪ್ರದೇಶದಲ್ಲಿ ಪತ್ತೆ ಮಾಡಿ “ಪಿಡೊಸ್ಟೈಬ್ ಟ್ಯುಬರ್ಲೊಸಸ್” ಎಂಬ ವೈಜ್ಞಾನಿಕ ಹೆಸರಿಟ್ಟರು. 1980ರಲ್ಲಿ ಮತ್ತೆ ಈ ಕಪ್ಪೆಯನ್ನು ಕೇರಳದ ಸೈಲೆಂಟ್ ವ್ಯಾಲಿ ಅಭಯಾರಣ್ಯದಲ್ಲಿ ಶೋಧಿಸಲಾಗಿತ್ತು. ಆದರೆ 2004ರಲ್ಲಿ ಶಿವಮೊಗ್ಗದ ಹೊಸನಗರ ತಾಲೂಕಿನ ಜಕ್ಕನಗದ್ದೆಯಲ್ಲಿ ವಿಜ್ಞಾನಿ ಡಾ| ಗುರುರಾಜ ಕೆ ವಿ ಈ ಕಪ್ಪೆಯನ್ನು ನೋಡಿ, ಅದರ ಧ್ವನಿ‌ ರೆಕಾರ್ಡ್ ಮಾಡಿದ್ದರು.

ಮಲೆನಾಡು ಮರಗಂತಿ ಕಪ್ಪೆಯನ್ನು ರಾಜ್ಯ ಕಪ್ಪೆಯಾಗಿ ಘೋಷಿಸಲು ಮನವಿ ಮಾಡಿ ಇದು ನಾಲ್ಕನೇ ಬಾರಿ ಅರ್ಜಿ ಸಲ್ಲಿಸಿದ್ದಾಗಿದೆ. ವಿಶ್ವದಲ್ಲೇ ಅಮೇರಿಕಾದ ಟೆಕ್ಸಾಸ್ ಹಾಗೂ ನ್ಯೂ ಮೆಕ್ಸಿಕೊ ರಾಜ್ಯಗಳು ಮಾತ್ರ ‘ರಾಜ್ಯ ಕಪ್ಪೆ’ಯನ್ನು ಘೋಷಿಸಿದೆ. ಕೇರಳ ರಾಜ್ಯದಲ್ಲೂ ಅಲ್ಲಿನ ಪರಿಸರ ವಿಜ್ಞಾನಿಗಳು ‘ಮಹಾಬಲಿ ಕಪ್ಪೆ’ ಪ್ರಭೇದವನ್ನು ರಾಜ್ಯ ಕಪ್ಪೆಯನ್ನಾಗಿ ಘೋಷಸಲು ಪ್ರಸ್ತಾಪಿಸಿದ್ದು, ಅದು ಪರಿಶೀಲನೆ ಹಂತದಲ್ಲಿದೆ. ಈ ವಿಷಯದಲ್ಲಿ ಕರ್ನಾಟಕ ಸರ್ಕಾರ ಶೀಘ್ರ ನಿರ್ಧಾರ ತೆಗೆದುಕೊಂಡರೆ ರಾಜ್ಯ ಕಪ್ಪೆ ಎಂದು ನಾಮ ನಿರ್ದೇಶಿಸಿದ ಭಾರತದ ಮೊದಲ ಹಾಗೂ ವಿಶ್ವದ ಮೂರನೇ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಜಾರಿಯಾಗಲಿದೆ ಏಕೀಕೃತ ಪಿಂಚಣಿ ಯೋಜನೆ

Tags :
Subscribe
Notify of
guest
0 Comments
Inline Feedbacks
View all comments

Bharathavani News Desk

Bharathavani is a prominent Kannada news portal based in Puttur, Karnataka, dedicated to delivering comprehensive coverage of local, state, national, and international news.

ಇನ್ನಷ್ಟು ಸುದ್ದಿಗಳು

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

ಇತ್ತೀಚಿನಸುದ್ದಿ

ಇನ್ನೊ ಓದಿ

ಭಾರಧ್ವಾಜಾಶ್ರಮ : ವೇದಾಧ್ಯಯನಕ್ಕೊಂದು ಗುರುಕುಲ..

By Balu Deraje  ಭಾರತದ ಪ್ರಾಚೀನ ಹಿಂದು ಧರ್ಮದ ಸಾಹಿತ್ಯ ಎಂದರೆ ವೇದಗಳು ಎಂದು ಪರಿಗಣಿಸಲಾಗಿದೆ. ಇದು ಸಂಸ್ಕೃತ ದಲ್ಲಿ ರಚಿಸಲ್ಪಟ್ಟಿದೆ. ಈ ವೇದಗಳನ್ನು ವ್ಯಾಸ ಮಹರ್ಷಿಗಳು ಪಠ್ಯ ರೂಪದಲ್ಲಿ 4 ವಿಭಾಗಗಳಾಗಿ ವಿಂಗಡಿಸಿ ಇವರ ನಾಲ್ಕು ಶಿಷ್ಯರಾದವರು 1: ಋಗ್ವೇದವನ್ನು ಪೈಲ ಮಹರ್ಷಿ, 2: ಯಜುರ್ವೇದ ವನ್ನು ವೈಶಂಪಾಯನ ಮಹರ್ಷಿ, 3:ಸಾಮವೇದ ವನ್ನು ಜೈಮಿನಿ ಮಹರ್ಷಿ, 4: ಅಥರ್ವಣ ವೇದವನ್ನು ಸುಮಂತ ಮಹರ್ಷಿ ಗಳು ಪ್ರಚಾರ ಮಾಡಿದರು. ನಂತರ ಗುರುಕುಲ ಪದ್ದತಿಯು ಆರಂಭಗೊಂಡಿತು ಎಂದು ಉಲ್ಲೇಖವಿದೆ.. ನಾಡಿನ...
suvarna vidhana soudha, belgaum, legislative building

ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ

ಜುಲೈ 12ರಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 25 ರಂದು ಉಪಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ. ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ...
arrows, tendency, businesswoman

ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಫಿಚ್ ರೇಟಿಂಗ್ಸ್

ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್​ನ ಅನಿಸಿಕೆಯಾಗಿದೆ.
cricket, sports, athlete

200 ಸಿಕ್ಸರ್‌ ಪೂರ್ಣಗೊಳಿಸಿ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ

ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಆಸ್ಟ್ರೇಲಿಯಾ ವಿರುದ್ದದ ತಮ್ಮ ಕೊನೆಯ ಸೂಪರ್‌-8ರ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ ಹಾಗೂ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್ಸ್‌ 1. ರೋಹಿತ್‌ ಶರ್ಮಾ-157 ಪಂದ್ಯಗಳಿಂದ 203 ಸಿಕ್ಸರ್‌2. ಮಾರ್ಟಿನ್‌ ಗಪ್ಟಿಲ್‌-122 ಪಂದ್ಯಗಳಿಂದ 173 ಸಿಕ್ಸರ್‌3. ಜೋಸ್‌ ಬಟ್ಲರ್‌- 123 ಪಂದ್ಯಗಳಿಂದ 137 ಸಿಕ್ಸರ್‌4. ಗ್ಲೆನ್‌ ಮ್ಯಾಕ್ಸ್‌ವೆಲ್‌-113 ಪಂದ್ಯಗಳಿಂದ 133...

Get in Touch

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

Technology Partner

© Copyright 2024 – All Rights reserved

0
Would love your thoughts, please comment.x
()
x